ಶ್ರೀ ಸದ್ಗುರು ಕಬೀರಾನಂದಸ್ವಾಮಿ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಚಿತ್ರದುರ್ಗ.
ದಾವಣಗೆರೆ ವಿಶ್ವವಿದ್ಯಾಲಯದ ಬಿ.ಇಡಿ. ಕೋರ್ಸ್ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ನಗರದ ಶ್ರೀ ಸದ್ಗುರು ಕಬೀರಾನಂದಸ್ವಾಮಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ. ತೃತೀಯ (3ನೇ ಸೆಮಿಸ್ಟರ್) ಸೆಮಿಸ್ಟರ್ನಲ್ಲಿ 98% ರಷ್ಟು ಫಲಿತಾಂಶ ಪಡೆದಿದೆ. 35 ವಿದ್ಯಾರ್ಥಿಗಳು ಅತ್ಯನ್ನತ ಶ್ರೇಣಿ, 2 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ತೃತೀಯ ಸೆಮಿಸ್ಟರ್ನ ಶುಭ ಕೆ.ಜೆ. 85%
(510) ಅಂಕಗಳನ್ನು ಗಳಿಸಿ ಪ್ರಥಮ ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ, ಅನಿಲ್ ಬೋರಯ್ಯ ಎನ್. ಬಿ. 84.33%
(506)
ಅಂಕಗಳನ್ನು ಗಳಿಸಿ ದ್ವಿತೀಯ ಅತ್ಯುನ್ನತ ಶ್ರೇಣಿ ಹಾಗೂ ಪ್ರದೀಪ್ ಜಿ. 83.67%
(502) ತೃತೀಯ ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ಸದ್ಗುರು ಕಬೀರಾನಂದಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದ್ಗುರು ಶಿವಲಿಂಗಾನAದಸ್ವಾಮಿಜೀಯವರು, ಪ್ರಾಂಶಪಾಲರಾದ ಡಾ. ಟಿ ಗಿರೀಶ್ ಹಾಗೂ ಎಲ್ಲ ಉಪನ್ಯಾಸಕರ ವರ್ಗದವರು ಅಭಿನಂದಿಸಿದರು.